Tuesday, August 11, 2026
Homeಟಾಪ್ ನ್ಯೂಸ್ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಸಚಿವ ಸತೀಶ ಜಾರಕಿಹೊಳಿ ಕರೆ

ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಸಚಿವ ಸತೀಶ ಜಾರಕಿಹೊಳಿ ಕರೆ

ಅಥಣಿ: ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಚರ್ಮಕಾರ ಮಹಾ ಒಕ್ಕೂಟ (ರಿ), ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ‘ರಾಷ್ಟ್ರೀಯ ಎಸ್‌ಸಿ/ಎಸ್‌ಟಿ ಹಬ್’ ವಿಶೇಷ ಕಾರ್ಯಾಗಾರವು ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಉದ್ದೇಶವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರಿಗೆ ತಲುಪಿಸುವುದು ಹಾಗೂ ಯುವ ಉದ್ಯಮಿಗಳನ್ನು ಉತ್ತೇಜಿಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವು ನೀಡುವುದಾಗಿತ್ತು.
ರಾಷ್ಟ್ರೀಯ ಎಸ್‌ಸಿ/ಎಸ್‌ಟಿ ಹಬ್ ಯೋಜನೆಯಡಿ ಲಭ್ಯವಿರುವ ಸಬ್ಸಿಡಿ, ಸಾಲ ಸೌಲಭ್ಯಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ಉದ್ಯಮ ಅಭಿವೃದ್ಧಿ ಅವಕಾಶಗಳ ಕುರಿತು ತಜ್ಞರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, “ಸರ್ಕಾರದಿಂದ ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸಮಾಜದ ಯುವಕರು ಹಾಗೂ ಉದ್ಯಮಿಗಳು ಈ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದು ಸದುಪಯೋಗಪಡಿಸಿಕೊಳ್ಳಬೇಕು. ಆರ್ಥಿಕ ಸಬಲೀಕರಣದ ಮೂಲಕ ಸಮಾಜದ ಪ್ರಗತಿ ಸಾಧ್ಯವಾಗುತ್ತದೆ. ರಾಷ್ಟ್ರೀಯ ಎಸ್‌ಸಿ/ಎಸ್‌ಟಿ ಹಬ್‌ನಂತಹ ಕಾರ್ಯಕ್ರಮಗಳು ಉದ್ಯಮಶೀಲತೆ ಬೆಳೆಸಲು ಹಾಗೂ ಹೊಸ ಅವಕಾಶಗಳನ್ನು ಸೃಷ್ಟಿಸಲು ಸಹಕಾರಿಯಾಗಿವೆ” ಎಂದು ಹೇಳಿದರು.

ನಂತರ ಅಖಿಲ ಕರ್ನಾಟಕ ಚರ್ಮಕಾರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಡಾ . ಅನಿಲ ಸೌಧಾಗರ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಸಮಾಜದ ಬಾಂಧವರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖಂಡ ಸದಾಶಿವ ಬೂಟಾಳಿ, ಗಜಾನನ ಮಂಗಸೂಳಿ, ಅಸ್ಲಂ ನಾಲಬಂದ, ಸುನೀತಾ ಐಹೊಳೆ,ರಮೇಶ ಸಿಂದಗಿ,ಡಾ.ಕೆ.ಸುರೇಶ, ಯೋಗೇಶ ಕುಮಾರ ಶರ್ಮಾ, ರುದ್ರೇಶ ಎಚ್ಚ. ಶ್ರೀ ಮುರುಗೇಶ್, ಪ್ರಶಾಂತ ಘೋಡಕೆ, ರುದ್ರೇಶಿ ಏ.ಎಸ್,ಭೀಮರಾವ ಪವಾರ, ಸತೀಶ ಬಸಗೌಡರ, ಶ್ರೀಮತಿ ಸುಜಾತಾ, ದಿಲೀಪ ಕಾಂಬಳೆ, ಎಸ್.ಏ.ಮಾಂಗ್,ಶಿವಾನಂದ ಸೌದಾಗರ, ಶೇಖರ್ ಸೌದಾಗರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ಸ್ಥಳೀಯ ಗಣ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

ಹೆಚ್ಚಿನ ಸುದ್ದಿ