Tuesday, February 10, 2026
HomeUncategorizedಇಂದಿರಾ ಕ್ಯಾಂಟಿನನಲ್ಲಿ ಗುಣಮಟ್ಟದ ಆಹಾರ ನೀಡದ ಗುತ್ತಿಗೆದಾರರ ಗುತ್ತಿಗೆ ರದ್ದುಪಡಿಸಲು ಕರವೆ ಒತ್ತಾಯ

ಇಂದಿರಾ ಕ್ಯಾಂಟಿನನಲ್ಲಿ ಗುಣಮಟ್ಟದ ಆಹಾರ ನೀಡದ ಗುತ್ತಿಗೆದಾರರ ಗುತ್ತಿಗೆ ರದ್ದುಪಡಿಸಲು ಕರವೆ ಒತ್ತಾಯ

ಲಿಂಗಸಗೂರು:ಪಟ್ಟನದಲ್ಲಿರುವ ಇಂದಿರಾ ಕ್ಯಾಂಟೀನಲ್ಲಿ ನಿತ್ಯವು ಗುಣಮಟ್ಟದ ಆಹಾರ ನೀಡುತ್ತಿಲ್ಲ ಕೂಡಲೇ ಗುತ್ತಿಗೆದಾರನ ಗುತ್ತಿಗೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಕಟ ರಕ್ಷಣಾ ವೇದಿಕೆಯ ಅಮರೇಶ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ

ಪಟ್ಟಣದಲಿರುವ ಇಂದಿರಾ ಕ್ಯಾಂಟೀನನಲ್ಲಿ ಗುಣಮಟ್ಟದ ಆಹಾರ ಹಮಚಿಕೆ ಮಾಡುವುದಿಲ್ಲ ಚಪಾತಿ ಹಾಗೂ ಅನ್ನ ಸರಿಯಾಗಿ ಬೆಂದಿರದ ಆಹಾರವನ್ನು ನೀಡಲಾಗುತ್ತಿದ್ದು ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಬಡವರು ಸೇರಿದಂತೆ ಹಲವಾರು ಜನ ಇಂತಹುದ್ದೆ ಆಹಾರ ಸೇವಿಸಬೇಕಾಗಿದೆ ಸರಕಾರದಿಂದ ಬರುವ ಹಣದಲ್ಲಿ ಇಂದಿರಾ ಕ್ಯಾಂಟೀನ್ ನಡೆಸಲಾಗುತ್ತಿದ್ದು ರಿಯಾಯಿತಿ ದರದಲ್ಲಿ ಆಹಾರ ದೊರೆಯುತ್ತಿದೆ ಎಂದು ಬೇರೆಬೇರೆಕಡೆಯಿಂದ ಬರುವ ಬಡವಿದ್ಯಾರ್ಥಿಗಳು ಇತರರು ಸದರಿ ಕ್ಯಾಂಟಿನ್ ಗೆ ಬರುತ್ತಾರೆ ಆದರೆ ಇಲ್ಲಿಯ ಅಡುಗೆಯ ಸಿಬ್ಬಂದಿ ತಮ್ಮ ಮನಸೋ ಇಚ್ಚೆಯಂತೆ ಚಪಾತಿ ಮಾಡಿ ಅರೆಬರೆ ಬೆಂದಿರುವ ಊಟ ನೀಡುತ್ತಾರೆ ಇಂತಹ ಊಟ ಸೇವಿಸಿದ ಹಲವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಅನ್ನವನ್ನು ಮುದ್ದೆಯಾಗಿ ಮಾಡಿದ್ದು ಅದರಲ್ಲಿ ಕೆಲವು ಬೆಂದಿವೆ ಕೆಲಹಾಗೆ ಇವೆ ಅಂತಹ ಆಹಾರವನ್ನು ನೋಡಿದ ಹಲವಾರು ವಿದ್ಯಾರ್ಥಿಗಳು ಇಂತಹದ್ದು ಹೇಗೆ ತಿನ್ನಬೇಕು ಎಂದು ಕೇಳಿದರೆ

ತಿಂದರೆ ತಿನ್ನಿ ಇಲ್ಲವಾದರೆ ಹೊಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಸಾರ್ವಜನಿಕರೊಡನೆ ವಾಗ್ವಾದಕ್ಕಿಳಿಯುವ ಬೆದರಿಕೆ ಹಾಕುವ ಇಲ್ಲಿಯ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಹಾಗೂ ಗುತ್ತಿಗೆದಾರರ ಗುತ್ತಿಗೆ ರದ್ದು ಪಡಿಸಿ ಬೇರೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆಈ ಸಂದರ್ಭದಲ್ಲಿ ಸಂಘಟನೆಯ ಅಮರೇಶ ಉಸ್ಕಿಹಾಳ, ದೇವರಾಜ, ರವಿಚಂದ್ರ ರಮೇಶ ಶಿವರಾಜ ಸೇರಿದಂತೆ ಇದ್ದರು

ವರದಿ : ಶಿವು ರಾಠೋಡ

ಹೆಚ್ಚಿನ ಸುದ್ದಿ