ಚಿತ್ರದುರ್ಗ (ಕರ್ನಾಟಕ): 25 ಡಿಸೆಂಬರ್ 2025: ಚಿತ್ರದುರ್ಗ ಜಿಲ್ಲೆಯ ಗೋರ್ಲಟ್ಟು ಮತ್ತು ಹಿರಿಯೂರು ಗ್ರಾಮದ ಸಮೀಪ ಜವನಗೊಂಡನಹಳ್ಳಿಯಲ್ಲಿ ಗುರುವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20ಕ್ಕೂ ಹೆಚ್ಚು ಮಂದಿ ಬೆಂಕಿಗಾಹುತಿಗೆ ಮೃತಪಟ್ಟ ಹೃದಯವಿದ್ರಾವಕ ಘಟನೆ ನಿಜಕ್ಕೂ ಆಘಾತಕಾರಿ.
ಸೀಬರ್ಡ್ ಪ್ರೈವೇಟ್ ಟ್ರಾವೆಲ್ಸ್ ಬಸ್, ಬೆಂಗಳೂರುದಿಂದ ಗೋಕರ್ಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಭಾರೀ ಬೆಂಕಿ ಕಾಣಿಸಿಕೊಂಡಿತು. ಅಪಘಾತದ ವೇಳೆ ಬಸ್ಸಿನಲ್ಲಿ ಸುಮಾರು 29 ಪ್ರಯಾಣಿಕಕರು ಇದ್ದರು ಎಂದು ಮಾಹಿತಿ 32 ಸೀಟು ಒಳಗೊಂಡಿದೆ ಬಸ್ ಇದಾಗಿತ್ತು.ಬೆಂಕಿ ಆವರಿಸಿದ ಕಾರಣ ಹಲವು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿ ಬಿದ್ದರು. ಅಧಿಕಾರಿಗಳ ಮಾಹಿತಿ ಪ್ರಕಾರ ಇದುವರೆಗೆ 20 ಕ್ಕಿಂತ ಹೆಚ್ಚು ಸಾವಿನ ಪ್ರಕರಣಗಳು ದೃಢಪಟ್ಟಿವೆ; ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳದಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ, ಮತ್ತು ಅಪಘಾತದ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಂಪಾದಕರು: ರಾಮಚಂದ್ರಪ್ಪ ಪೂಜೇರ
