Monday, August 10, 2026
Homeಜಿಲ್ಲಾ ಸುದ್ದಿಗಳುದೇವದುರ್ಗ ಜೆಡಿಎಸ್ ನೂತನ ಅಧ್ಯಕ್ಷರಾಗಿ ಶ್ರೀ ಬಸನಗೌಡ ದೇಸಾಯಿ ವಕೀಲರ ಅಧಿಕಾರ ಸ್ವೀಕಾರ !

ದೇವದುರ್ಗ ಜೆಡಿಎಸ್ ನೂತನ ಅಧ್ಯಕ್ಷರಾಗಿ ಶ್ರೀ ಬಸನಗೌಡ ದೇಸಾಯಿ ವಕೀಲರ ಅಧಿಕಾರ ಸ್ವೀಕಾರ !

​ದೇವದುರ್ಗ: ತೀವ್ರ ಕುತೂಹಲ ಮತ್ತು ಸುದೀರ್ಘ ಚರ್ಚೆಗಳ ನಂತರ, ಕೊನೆಗೂ ದೇವದುರ್ಗ ತಾಲೂಕಿನ ಜನತಾದಳ (ಜಾತ್ಯತೀತ) ಪಕ್ಷದ ನೂತನ ತಾಲೂಕು ಅಧ್ಯಕ್ಷರಾಗಿ ಹಿರಿಯ ವಕೀಲರಾದ ಶ್ರೀ ಬಸನಗೌಡ ದೇಸಾಯಿ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.
​ಪಕ್ಷದ ವರಿಷ್ಠರು ಹಳೇ ಮುಖಂಡರ ಅಭಿಪ್ರಾಯ ಹಾಗೂ ತಾಲೂಕಿನ ರಾಜಕೀಯ ಸಮೀಕರಣಗಳನ್ನು ತೂಗಿ ನೋಡಿ ಅಂತಿಮವಾಗಿ ಶ್ರೀ ಬಸನಗೌಡ ದೇಸಾಯಿ ಅವರ ಹೆಗಲಿಗೆ ಈ ಜವಾಬ್ದಾರಿಯನ್ನು ಹೊರಿಸಿದ್ದಾರೆ.
​ಪಕ್ಷದ ಧ್ವಜ ಹಸ್ತಾಂತರಿಸಿ ಶುಭ ಹಾರೈಕೆ
​ಇತ್ತೀಚೆಗೆ ನಡೆದ ಅಧಿಕೃತ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಪ್ರಮುಖ ನಾಯಕರು ಮತ್ತು ಶಾಸಕರು ನೂತನ ಅಧ್ಯಕ್ಷರಾದ ಬಸನಗೌಡ ದೇಸಾಯಿ ಅವರಿಗೆ ಜೆಡಿಎಸ್ ಪಕ್ಷದ ಅಧಿಕೃತ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು
​ಈ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖ ಮುಖಂಡರಾದ ಶ್ರೀಮತಿ ಕರೆಮ್ಮ ಜಿ. ನಾಯಕ್ ಸೇರಿದಂತೆ ತಾಲೂಕಿನ ಹಾಗೂ ಜಿಲ್ಲೆಯ ಹಿರಿಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದು ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ ಅಭಿನಂದಿಸಿದರು.
​ನೂತನ ಅಧ್ಯಕ್ಷರ ನಡೆ:
​”ಪಕ್ಷದ ವರಿಷ್ಠರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ. ತಾಲೂಕಿನಲ್ಲಿ ಹಳೇ ಮತ್ತು ಹೊಸ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು, ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ,” ಎಂದು ನೂತನ ಅಧ್ಯಕ್ಷ ಬಸನಗೌಡ ದೇಸಾಯಿ ವಕೀಲರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಶ್ರೀ ​ಬಸನಗೌಡ ದೇಸಾಯಿ ಅವರ ನೇಮಕಾತಿಯಿಂದ ದೇವದುರ್ಗ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿದ್ದು, ಮುಂಬರುವ ಸ್ಥಳೀಯ ತಾಲೂಕು ಜಿಲ್ಲಾ ಪಂಚಾಯತ್ ಚುನಾವಣೆಗೆ ಹಾಗೂ ಪಕ್ಷದ ಸಂಘಟನೆಗೆ ಹೊಸ ಶಕ್ತಿ ಬಂದಂತಾಗಿದೆ ಎಂದು ಸ್ಥಳೀಯ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸುದ್ದಿ