Thursday, April 23, 2026
Homeಧಾರ್ಮಿಕಸಂಗೊಳ್ಳಿಯಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ: ಏಪ್ರಿಲ್ 24ರವರೆಗೆ ಅದ್ಧೂರಿ ಜಾತ್ರಾ ಮಹೋತ್ಸವ

ಸಂಗೊಳ್ಳಿಯಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ: ಏಪ್ರಿಲ್ 24ರವರೆಗೆ ಅದ್ಧೂರಿ ಜಾತ್ರಾ ಮಹೋತ್ಸವ

​ಚನ್ನಮ್ಕಿಮನ ತ್ತೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ಭೂಮಿಯಾದ ಐತಿಹಾಸಿಕ ಸಂಗೊಳ್ಳಿ ಗ್ರಾಮದಲ್ಲಿ ನೂತನವಾಗಿ ಸಂಪೂರ್ಣ ಕಲ್ಲಿನಿಂದ ಕೆತ್ತಲ್ಪಟ್ಟ ಗ್ರಾಮದೇವಿ ದೇವಸ್ಥಾನವು ಭವ್ಯವಾಗಿ ಉದ್ಘಾಟನೆಗೊಂಡಿದೆ. ಈ ಪ್ರಯುಕ್ತ ಏಪ್ರಿಲ್ 20ರಿಂದ 24ರ ವರೆಗೆ ಐದು ದಿನಗಳ ಕಾಲ ದೇವಸ್ಥಾನದ ವಾಸ್ತು ಶಾಂತಿ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಲಿದೆ.

​ದೇವಸ್ಥಾನದ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಡೀ ಗ್ರಾಮವು ನವವಧುವಿನಂತೆ ಕಂಗೊಳಿಸುತ್ತಿದ್ದು ರಸ್ತೆಗಳ ಉದ್ದಕ್ಕೂ ತಳಿರು ತೋರಣಗಳನ್ನು ಕಟ್ಟಿ ಅಲಂಕರಿಸಲಾಗಿದೆ.ಮನೆಗಳ ಮುಂದೆ ರಂಗೋಲಿ ಹಾಕಿ ದೀಪಾಲಂಕಾರ ಮಾಡಲಾಗಿದ್ದು ಭಕ್ತರನ್ನು ಸ್ವಾಗತಿಸಲು ಇಡೀ ಊರೇ ಸನ್ನದ್ಧವಾಗಿದೆ.

​ಏಪ್ರಿಲ್ 21 ರಿಂದ 23 ರ ವರೆಗೆ ಮೂರು ದಿನಗಳ ಕಾಲ ದೇವಸ್ಥಾನದ ಆವರಣದಲ್ಲಿ ವಿವಿಧ ದೇವತಾ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಗಳು ಶಾಸ್ತ್ರೋಕ್ತವಾಗಿ ನಡೆಯಲಿವೆ.

​ಏಪ್ರಿಲ್ 22 ರಂದು ಉಡಿ ತುಂಬುವ ಕಾರ್ಯಕ್ರಮ ಹಾಗು ದೇವಸ್ಥಾನದ ಕಳಸಾರೋಹಣ ನಡೆಯಲಿದ್ದು ರಂಭಾಪುರಿ ಜಗದ್ಗುರುಗಳು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.

​ಧಾರ್ಮಿಕ ಕಾರ್ಯಕ್ರಮಗಳ ಜೊತೆಜೊತೆಗೆ ಜನರ ಮನರಂಜನೆಗಾಗಿ ಪ್ರತಿದಿನ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿದಿನ ಸಂಜೆ ವಿದ್ವಾಂಸರಿಂದ ಆಧ್ಯಾತ್ಮಿಕ ಪ್ರವಚನ ನಡೆಯಲಿದ್ದು, ಆಗಮಿಸುವ ಸಾವಿರಾರು ಭಕ್ತರಿಗೆ ನಿರಂತರ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿದೆ.
ಸ್ಥಳೀಯ ಹಾಗೂ ರಾಜ್ಯ ಮಟ್ಟದ ಕಲಾವಿದರಿಂದ ಪ್ರತಿ ರಾತ್ರಿ , ಸಾಂಸ್ಕೃತಿಕ ವೈಭವ ನಡೆಯಲಿದೆ.​ 23 ರಂದು ಹಾಸ್ಯಮಯ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು ಜಿ ಕನ್ನಡ ಹಳ್ಳಿಪವರ್ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳು ಭಾಗವಸಲಿದ್ದಾರೆ.

​ಸಂಗೊಳ್ಳಿಯ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸುತ್ತಮುತ್ತಲಿನ ಹಳ್ಳಿಗಳ ಜನರು ಹಾಗೂ ರಾಯಣ್ಣನ ಅಭಿಮಾನಿಗಳು ಆಗಮಿಸಿ ಗ್ರಾಮದೇವಿಯ ಕೃಪೆಗೆ ಪಾತ್ರರಾಗಲು ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರು ಕೋರಿದ್ದಾರೆ.

ಹೆಚ್ಚಿನ ಸುದ್ದಿ