ಬೆಂಗಳೂರು : ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಚಿಕ್ಕಬನಹಳ್ಳಿ ಗ್ರಾಮದ ಸರ್ಕಾರಿ ಜಾಗವನ್ನು ಕಬ್ಬಳಿಕೆ ಮಾಡಿಕೊಂಡಿದ್ದಾರೆ ಎಂದು ಪ್ರೆಸ್ಟೀಜ್ ಗ್ರೂಪ್ ಮಾಲೀಕ, ಬೆಂಗಳೂರು ಜಿಲ್ಲಾಧಿಕಾರಿಗಳು ಹಾಗೂ ಪೂರ್ವ ತಾಲ್ಲೂಕು ತಹಶೀಲ್ದಾರ್ ವಿರುದ್ಧ ತಮಟೆ ಚಳುವಳಿ ಮಾಡುವುದರ ಮೂಲಕ, ಪ್ರೆಸ್ಟೀಜ್ ಗ್ರೂಪ್ ಮಾಲೀಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಜಿ ಸಿ ವೆಂಕಟಮನಪ್ಪ, ಯುವ ಘಟಕ ರಾಜ್ಯಾಧ್ಯಕ್ಷ ನಾಗೇಶ್, ರಾಜ್ಯ ಕಾರ್ಯಧ್ಯಕ್ಷರು ಗೋವಿಂದಯ್ಯ , ಗೋಪಾಲ್ ಸೇರಿದಂತೆ ನೂರಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ ನಡೆಯಿತು.
