Tuesday, February 10, 2026
HomeUncategorizedಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅಂಬೇಡ್ಕರ್ ಸೇನೆ...

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅಂಬೇಡ್ಕರ್ ಸೇನೆ ಒತ್ತಾಯ.

ಲಿಂಗಸಗೂರು: ಮೇ.6.ತಾಲ್ಲೂಕಿನ
ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಗೆ
ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿದರು ಹತೋಟಿಗೆ ತರುವ ಕೆಲಸ ಮಾಡಿದರು ಆರೋಗ್ಯ ಇಲಾಖೆಯವರು ಬೋರ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕೆ ಕಾರಣವಾಗಿದೆ ಎಂದು ಹೇಳಿದರು ಪತ್ರಿಕೆಯಲ್ಲು ಬಂದಿರುತ್ತದೆ.

ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ.

ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿರಿ ನಿರ್ಮಾಣವಾಗಿದೆ, ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.

ಜೆಜೆಎಮ್ ಮೂಲಕ ಕೋರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ
ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇವೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ. ಅನಿಲ್ ಕುಮಾರ್. ಅಮರೇಶ ಆನೇಹೂಸೂರು. ಇತ್ತರರು
ಇದರು.

ವರದಿಗಾರ : ಶಿವು ರಾಠೋಡ

ಹೆಚ್ಚಿನ ಸುದ್ದಿ