ಧಾರವಾಡ: ಎಡಿಯೂರು ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಜಗದ್ಗುರು ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಹಾಗೂ ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಪೂಜ್ಯಶ್ರೀ ಡಾ.ಅಲ್ಲಮ ಮಹಾಪ್ರಭುಗಳ ಸಾರಥ್ಯದಲ್ಲಿ ಕಲ್ಯಾಣ ನಗರದಲ್ಲಿರುವ ಶ್ರೀ ಸಿದ್ಧರಾಮೇಶ್ವರ ಮಾರ್ಗದರ್ಶಿ ಗ್ರಂಥಾಲಯದಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ ಹಾಗೂ ಎಂ.ಪಂಚಪ್ಪ ಎನ್.ಶಶಿಕುಮಾರ್, ಸರ್ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ದಿನಾಂಕ 04-01-2026 ರಂದು ಕಲ್ಯಾಣ ನಗರದಲ್ಲಿರುವ ‘ಮಜ್ಜಿಗಿ ಪಂಚಪ್ಪ ಸಭಾಭವನ’ದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಖ್ಯಾತ ಮನೋವಿಜ್ಞಾನಿ ಡಾ.ಆನಂದ್ ಪಾಂಡುರಂಗಿ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ, ಹಿರಿಯ ಐಎಎಸ್ ಅಧಿಕಾರಿ ಗೋವಿಂದ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯಧ್ಯಕ್ಷರಾದ ಶಶಿಧರ್ ತೋಡ್ಕರ್ ವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿಗಾರರು : ಹನಮಂತ ಬಿರಾದಾರಪಾಟೀಲ
ವರದಿಗಾರರು ಬೇಕಾಗಿದ್ದಾರೆ. ಆಸಕ್ತಿ ಹೊಂದಿರುವ ಪ್ರಾಮಾಣಿಕ ವರದಿಗಾರರು ನಮ್ಮನ್ನು ಸಂಪರ್ಕಿಸಿ..
kolinewstv.com@gmail.com
www.kolinewstv.com
ಮೋ.ನಂಬರ್–9035262956
(ಸುದ್ದಿ ಮತ್ತು ಜಾಹಿರಾತುಗಳಿಗೆ ನಮ್ಮನ್ನು ಸಂಪರ್ಕಿಸಿ.)
