ಚನ್ನಮ್ಮನ ಕಿತ್ತೂರು : ಜಮೀನು ಕಬಳಿಸುವ ಉದ್ದೇಶದಿಂದ ತಾಯಿ, ಮಗ ಮತ್ತು ಇತರರು ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ ಘಟನೆ ಕಿತ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಪೋಲಿಸ್ ರ ತನಿಖೆಯ ವೇಳೆ ಮೃತ ವ್ಯಕ್ತಿ ಹಿರೇನಂದಿಹಳ್ಳಿ ಗ್ರಾಮದ ಕಲ್ಲೇಶ ಶಂಕರಪ್ಪ ಕೋಟಿ (50) ಎಂದು ಗುರುತಿಸಲಾಗಿದೆ.
ಆರೋಪಿತರಾದ ಹಿರೇನಂದಿಹಳ್ಳಿ ಗ್ರಾಮದ ಮಹೇಶ ಮಡಿವಾಳಪ್ಪ ಅಂಬಣ್ಣವರ ಹಾಗೂ ಮುದಕಪ್ಪ ಪದ್ಮರಾಜ ಕೋಳಿಕರ, ಹಾಗೂ ‘ಮೃತನ ಪತ್ನಿ ಕಸ್ತೂರಿ ಕಲ್ಲೇಶ ಕೋಟಿ, ಮೃತನ ಪುತ್ರ ಕಿರಣ ಕಲ್ಲೇಶ ಕೋಟಿ ಆರೋಪಿತರೊಂದಿಗೆ ಸೇರಿ, ಮೃತನ ಹೆಸರಿನಲ್ಲಿರುವ ಆಸ್ತಿಯನ್ನು ಕಬಳಿಸುವುದು ಮತ್ತು ಆ ಆಸ್ತಿಯನ್ನು ಮಾರಾಟ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಕೊಲೆ ಮಾಡಿರುವುದು ಪೋಲಿಸ್ ರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಕಳೆದ ಒಂದು ವಾರದ ಹಿಂದೆ ಗೋವಿನ ಜೋಳದ ಜಮೀನಿನಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಕಿತ್ತೂರ ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಹಾಗೂ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೊಲೆಯಾದ ಕಲ್ಲೇಶ ಶಂಕರಪ್ಪ ಕೋಟಿ ಯನ್ನು ಆಯುಧದಿಂದ ಹೊಡೆದು ಕೊಲೆ ಮಾಡಿ, ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಗೋವಿನ ಚೋಳದ ಬೆಳೆಯ ನಡುವೆ ಶವವನ್ನು ತಂದು ಹಾಕಿರುವದು ಈ ಬಗ್ಗೆ ಕಿತ್ತೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಚಂದ್ರಶೇಖರ ಹನಮನಾಳ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣದ ತನಿಖೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ, ಬೈಲಹೊಂಗಲ ಡಿಎಸ್.ಪಿ ಡಾ. ವೀರಯ್ಯ ಹಿರೇಮಠ ಮಾರ್ಗದರ್ಶನದಲ್ಲಿ ಕಿತ್ತೂರ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ಐ ಪ್ರವೀಣ ಗಂಗೋಳ ನೇತೃತ್ವದ ತಂಡ ಯಶಸ್ವಿಯಾಗಿ ಕಾರ್ಯ ನಡೆಸಿದೆ. ತನಿಖಾ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.

ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)
