Tuesday, March 3, 2026
HomeUncategorizedಮಧುಗಿರಿ: ತಾಲ್ಲೂಕಿನ ಪುರವರ ಹೋಬಳಿಯ ರೈತ ಬಾಂಧವರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿ, ಕೋಡಗದಾಲ ಹಾಗೂ ಕೊಂಡವಾಡಿ...

ಮಧುಗಿರಿ: ತಾಲ್ಲೂಕಿನ ಪುರವರ ಹೋಬಳಿಯ ರೈತ ಬಾಂಧವರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿ, ಕೋಡಗದಾಲ ಹಾಗೂ ಕೊಂಡವಾಡಿ ಗ್ರಾಮಗಳಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಉದ್ಘಾಟನಾ ಸಮಾರಂಭವು ಅತ್ಯಂತ ಯಶಸ್ವಿಯಾಗಿ ನೆರವೇರಿತು.

ರಾಜ್ಯದ ಗೌರವಾನ್ವಿತ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಡಾ. ಜಿ. ಪರಮೇಶ್ವರ್ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ಸಂಘಗಳ ಸದಸ್ಯರು ಹಾಗೂ ರೈತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು ಮತ್ತು ಗಣ್ಯರು, ಸಹಕಾರ ಸಂಘಗಳು ಗ್ರಾಮೀಣ ಭಾಗದ ಆರ್ಥಿಕ ಪ್ರಗತಿಯ ಬೆನ್ನೆಲುಬು ಎಂದು ಬಣ್ಣಿಸಿದರು.
ಗಣ್ಯರ ಉಪಸ್ಥಿತಿ:
ಈ ಅಭಿವೃದ್ಧಿ ಪೂರಕ ಕಾರ್ಯಕ್ರಮದಲ್ಲಿ ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷರಾದ ಜಿ.ಜೆ. ರಾಜಣ್ಣ, ಬಿ.ಎಂ.ಟಿ.ಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರುಗಳಾದ ಹನುಮಾನ್ ಮತ್ತು ನಾಗೇಶ್ ಬಾಬು ಅವರು ಭಾಗವಹಿಸಿದ್ದರು.
ಅಲ್ಲದೆ, ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಸಂಘಗಳ ಅಧ್ಯಕ್ಷರುಗಳಾದ ರಾಜ್ ಕುಮಾರ್ ಹಾಗೂ ಕರಿಯಣ್ಣ ಸೇರಿದಂತೆ ಸ್ಥಳೀಯ ಮುಖಂಡರುಗಳು, ಸಂಘದ ನಿರ್ದೇಶಕರುಗಳು, ಅಪಾರ ಸಂಖ್ಯೆಯ ರೈತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಈ ನೂತನ ಸಹಕಾರ ಸಂಘಗಳ ಸ್ಥಾಪನೆಯಿಂದ ಸ್ಥಳೀಯ ರೈತರಿಗೆ ಸಾಲ ಸೌಲಭ್ಯ ಹಾಗೂ ಕೃಷಿ ಸಂಬಂಧಿತ ಸೇವೆಗಳು ಇನ್ನಷ್ಟು ಸುಲಭವಾಗಿ ಲಭ್ಯವಾಗಲಿವೆ ಎಂದು ಆಶಿಸಲಾಯಿತು

ಹೆಚ್ಚಿನ ಸುದ್ದಿ