
ಮೊದಲು ಇದ್ದ ನೀರಿನ ತೊಟ್ಟಿ
ಶಿಗ್ಗಾಂವಿ: ಕುನ್ನೂರ ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದ ದನಗಳ ನೀರಿನ ತೊಟ್ಟಿಯ ಬಗ್ಗೆ ಕೋಲಿ ನ್ಯೂಸ್ ವರದಿ ಪ್ರಕಟವಾದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಇದೀಗ ತೊಟ್ಟಿಗೆ ಶುದ್ಧ ನೀರು ತುಂಬಿಸಿ, ನಿಯಮಿತ ನಿರ್ವಹಣೆ ಮಾಡುವ ಭರವಸೆ ಅಧಿಕಾರಿಗಳು ನೀಡಿದ್ದಾರೆ.
“ಸುದ್ದಿ ಪರಿಣಾಮದಿಂದಲೇ ಸಮಸ್ಯೆಗೆ ಪರಿಹಾರ ದೊರೆತಿದೆ” ಎಂದು ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.
ವರದಿ: ಸೋಮಶೇಖರ ಲಮಾಣಿ
