Tuesday, February 10, 2026
HomeUncategorizedಎಸಿ, ಎಸ್ಟಿ ಹಾಸ್ಟೆಲ್‌ಗೆ ಶಾಸಕ ಆರ್.ವಿ.ಎನ್. ದಿಢೀರ್ ಭೇಟಿ

ಎಸಿ, ಎಸ್ಟಿ ಹಾಸ್ಟೆಲ್‌ಗೆ ಶಾಸಕ ಆರ್.ವಿ.ಎನ್. ದಿಢೀರ್ ಭೇಟಿ


ಸುರಪುರ : ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಸೋಮವಾರ ಮುಂಜಾನೆ ದಿಢೀರ್ ಭೇಟಿ ನೀಡಿದರು.
ಹಾಸ್ಟೆಲ್‌ನಲ್ಲಿರುವ ಸೌಲಭ್ಯಗಳ ಕುರಿತು ವಾರ್ಡ್‌ನ್ ಅವರಿಂದ ಮಾಹಿತಿಯನ್ನು ಪಡೆದಿದ್ದಾರೆ, ಉಗ್ರಾಣಕ್ಕೆ ಹೋಗಿ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಲಾಗಿದೆ. ಹಾಸ್ಟೆಲ್ ಆವರಣ, ಕೊಠಡಿಗಳು, ಶೌಚಾಲಯ ಮತ್ತು ಅಡುಗೆ ಕೋಣೆಗಳ ಸಮಯವನ್ನು ವೀಕ್ಷಿಸಿದರು.
ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ
ವಾರ್ಡ್‌ನ್ ನಮ್ಮನ್ನು ಗದರಿಸುತ್ತಾರೆ. ಬೆದರಿಕೆಯಿಂದ ನಮ್ಮನ್ನು ಇಟ್ಟಿದ್ದಾರೆ. ಹಾಲಿಗೆ ಹೆಚ್ಚು ನೀರು ಬೆರೆಸಿಕೊಡುತ್ತಾರೆ. ನೋಡಿ ಸರ್ ಎಂದು ವಿದ್ಯಾರ್ಥಿಗಳು ಹಾಲಿನ ಲೋಟ ತಂದು ತೋರಿಸಿದ್ದರು. ಮಧ್ಯಾಹ್ನದ ಚಪಾತಿಯನ್ನು ರಾತ್ರಿ ಕೊಡುತ್ತಾರೆ. ಮೆನು ತಿಂಡಿ, ಊಟ ಕೊಡುವುದಿಲ್ಲ ಎಂದು ಹಲವು ಸಮಸ್ಯೆಗಳು ಅಲವತ್ತುಕೊಂಡರು.

ಹಾಸ್ಟೆಲ್ ವಾರ್ಡನ್ ಗೆ ಶಾಸಕರ ಕ್ಲಾಸ್..!
ವಾರ್ಡನ್ (ಮೇಲ್ವಿಚಾರಿ) ಮಕ್ಕಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ.ಸಮಯ ಪರಿಪಾಲನೆ ಮಾಡಲ್ಲ, ಸರಿಯಾದ ಬಾಳೆಹಣ್ಣು ವಿತರಣೆ ಮಾಡುವುದಿಲ್ಲ ಎಂದು ಮಕ್ಕಳಿಂದ ದೂರು ಬಂದ ಹಿನ್ನೆಲೆ ಇಂದು ಮಾನ್ಯ ಶಾಸಕರು ಶಾಲೆಗೆ ದಿಢೀರ್ ಭೇಟಿ ನೀಡಿ ವಾರ್ಡನ್ ರವರಿಗೆ ಎಚ್ಚರಿಕೆ ನೀಡಿದರು ಮಕ್ಕಳ ಜೊತೆ ಸೌಜನ್ಯ ರೀತಿ ವರ್ತಿಸಬೇಕೆಂದು ಹೇಳಿದರು.

ಪರಿಶಿಷ್ಟ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲೇ ನಿಂತ ಚರಂಡಿ ನೀರು ಶಾಸಕರಿಗೆ ಆಹ್ವಾನ ನೀಡಿತು. ಹಾಸ್ಟೆಲ್ ಸುತ್ತ ಜಾಲಿ, ಕುರುಚಲು ಬೆಳೆದಿದ್ದು, ಇಂಗು ಗುಂಡಿ ಸಹ ನಿರ್ಮಿಸದೆ ಇರುವುದನ್ನು ಕಂಡ ಶಾಸಕರು, ವಾರ್ಡನ್ ನಿರ್ಲಕ್ಷದ ವಿರುದ್ಧ ಕಿಡಿಕಾರಿದರು. ಸ್ವಚ್ಛತೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಶಾಸಕರು ಬೆಳಗಿನ ತಿಂಡಿಯನ್ನು ಸವಿದರು ನಂತರ ಶಾಸಕರು ಮಾತನಾಡಿ ‘ಇನ್ನು ಮುಂದೆ ಹೆದರಬೇಡಿ, ನಿಮಗೆ ಮೆನು ಪ್ರಕಾರವೇ ತಿಂಡಿ, ಊಟ ಕೊಡುತ್ತಾರೆ. ಧೈರ್ಯವಾಗಿರಿ, ನಿಮಗೆ ಸಮಸ್ಯೆ ಎದುರಾದರೆ ತಕ್ಷಣ ನನಗೆ ಕರೆ ಮಾಡಿ’ ಎಂದು ಧೈರ್ಯ ತುಂಬಿ ಸಾಂತ್ವನ ಹೇಳಿದರು.

ಜಿಲ್ಲಾ ವರದಿಗಾರರು : ಶಿವು ರಾಠೋಡ ಯಾದಗಿರಿ

ಹೆಚ್ಚಿನ ಸುದ್ದಿ